ಬೆಳಗಾವಿ/ಚಿಕ್ಕೋಡಿ: `ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾ ನದಿಗೆ ಶನಿವಾರ ಸುಮಾರು 600 ಕ್ಯೂಸೆಕ್ ನೀರು ಬಿಡಲಾಗಿದ್ದು, ಭಾನುವಾರ ಮುಂಜಾನೆಯ ವೇಳೆಗೆ ನದಿಯಲ್ಲಿ ನೀರಿನ ಹರಿವು ಹೆಚ್ಚಲಿದೆ` ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ `ಪ್ರಜಾವಾಣಿ~ಗೆ ತಿಳಿಸಿದರು. `ರಾಜಾಪುರ ಬ್ಯಾರೆಜ್ನಿಂದ ಶನಿವಾರ 500 ಕ್ಯೂಸೆಕ್ ನೀರನ್ನು ಬಿಡಲಾಗಿದೆ.
ರಾತ್ರಿಯ ವೇಳೆಗೆ 2,000 ಕ್ಯೂಸೆಕ್ಗೆ ಏರಲಿದೆ. ಭಾನುವಾರ 5,000 ಕ್ಯೂಸೆಕ್ ಬಿಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಭಾನುವಾರದ ವೇಳೆಗೆ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಲಿದೆ~ ಎಂದು ಅವರು ಹೇಳಿದರು.
`ರಾಜಾಪುರದ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 0.90 ಟಿಎಂಸಿ ಹಾಗೂ ಕಾಳಮ್ಮವಾಡಿ ಜಲಾಶಯದಿಂದ ದೂದಗಂಗಾ ನದಿಗೆ ಒಂದು ಟಿಎಂಸಿ ನೀರು ಬಿಡಲಾಗುತ್ತದೆ.
ಶನಿವಾರ ಕಾಳಮ್ಮವಾಡಿ ಜಲಾಶಯದಿಂದ ದೂದಗಂಗಾ ನದಿಗೆ ಸುಮಾರು 350 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ~ ಎಂದು ಅವರು ತಿಳಿಸಿದರು.