ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಸ್ವಾವಲಂಬನೆ: ಭ್ರೂಣಹತ್ಯೆ ತಡೆ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಮಹಿಳೆಯರು ಆರ್ಥಿಕವಾಗಿ ಸದೃಢರಾಗುವ ಮೂಲಕ ಭ್ರೂಣಹತ್ಯೆಯಂತಹ ಸಮಸ್ಯೆಯನ್ನು ತೊಡೆದುಹಾಕಬಹುದು~ ಎಂದು ಮಾಜಿ ಸಚಿವೆ ರಾಣಿ ಸತೀಶ್ ಹೇಳಿದರು.

ಬಿಲ್ಲವ ಅಸೋಸಿಯೇಷನ್ ಬೆಂಗಳೂರು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಉತ್ತಮ ಸಮಾಜ ನಿರ್ಮಾಣಗೊಳ್ಳಬೇಕಾದರೆ ಮಹಿಳೆಯರ ಪಾತ್ರ ಮಹತ್ವದ್ದು, ಕುಟುಂಬ ಸದಸ್ಯರ ಪ್ರತಿ ತಪ್ಪುಗಳನ್ನು ಸರಿಪಡಿಸಿ ಸೂಕ್ತ ಮಾರ್ಗದರ್ಶನ ನೀಡುವ ಜವಾಬ್ದಾರಿ ಮಹಿಳೆಯರ ಮೇಲಿರುತ್ತದೆ~ ಎಂದು ಹೇಳಿದರು.

`ದೃಢ ಮನಸ್ಸು ಮತ್ತು ಪರಿಶ್ರಮ ಮಾತ್ರ ಸಾಧನೆ ಮಾಡಲು ಪ್ರೇರೇಪಿಸುತ್ತದೆ. ಗೃಹಿಣಿಯರು ಸುತ್ತಮುತ್ತಲ ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ಹೊಸ ಸವಾಲನ್ನು ಎದುರಿಸಬಹುದು~ ಎಂದರು.

ಶಾಸಕ ದಿನೇಶ್ ಗುಂಡೂರಾವ್, `ಬಿಲ್ಲವ ಸಮುದಾಯದಿಂದ ಪ್ರಾಮಾಣಿಕ ರಾಜಕಾರಣಿಗಳು ಹೊರಹೊಮ್ಮಿದ್ದಾರೆ. ಈ ಸಮುದಾಯದಲ್ಲಿ ಮಹಿಳೆಯರು ಶೈಕ್ಷಣಿಕವಾಗಿ ಮುಂದುವರಿದಿದ್ದರೂ, ಸಾರ್ವಜನಿಕ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವವರ ಸಂಖ್ಯೆ ವಿರಳವಾಗಿದೆ~ ಎಂದು ಹೇಳಿದರು.

`ಸಮಾಜ ಸುಧಾರಕ ನಾರಾಯಣಗುರು ಅವರ ವೈಚಾರಿಕ ವಿಚಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಪ್ರಸ್ತುತ ಎದುರಿಸುತ್ತಿರುವ ಹಲವು ಸಾಮಾಜಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬಹುದು~ ಎಂದರು.

ಫವರ್ ಲಿಪ್ಟಿಂಗ್ ಚಾಂಪಿಯನ್‌ಗಳಾದ ಸುಪ್ರೀತಾ ಮತ್ತು ಅಶ್ವಿತಾ ಅವರಿಗೆ ಸನ್ಮಾನ ಮಾಡಲಾಯಿತು. `ಡೆಕ್ಕನ್ ಹೆರಾಲ್ಡ್~ ಸುದ್ದಿ ಸಂಪಾದಕರಾದ ಗಾಯಿತ್ರಿ ನಿವಾಸ್, ಸಂಘದ ಅಧ್ಯಕ್ಷ ಎಂ.ವೇದಕುಮಾರ್, ಭಾಸ್ಕರ್ ಸಿ.ಅಮೀನ್, ಭಾಸ್ಕರ ಪೂಜಾರಿ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT