ಧಾರವಾಡ: `ಇಂದಿನ ಮಾರುಕಟ್ಟೆ ಆಧಾರಿತ ಆರ್ಥಿಕ ವ್ಯವಸ್ಥೆಯಲ್ಲಿ ಮಹಿಳೆಯರನ್ನು ವ್ಯಾಪಾರದ ಸರಕನ್ನಾಗಿ ಪರಿಗಣಿಸಲಾಗುತ್ತಿದೆ' ಎಂದು ಮುಂಬೈನ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ `ಆರೋಗ್ಯ ಮತ್ತು ಮಾನಸಿಕ ಆರೋಗ್ಯ ಕೇಂದ್ರ'ದ ಮುಖ್ಯಸ್ಥೆ ಪ್ರೊ. ವಿಮಲಾ ನಾಡಕರ್ಣಿ ವಿಷಾದ ವ್ಯಕ್ತಪಡಿಸಿದರು.
ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ಸ್ನಾತಕೋತ್ತರ ವಿಭಾಗ ನಗರದಲ್ಲಿ ಗುರುವಾರ ಏರ್ಪಡಿಸಿದ್ದ `ಸಮಾಜ ಕಾರ್ಯದ ಬದಲಾಗುತ್ತಿರುವ ಮುಖಗಳು; ನೂತನ ಸಂವತ್ಸರದಲ್ಲಿ ಸಮಾಜ ಕಾರ್ಯ ವೃತ್ತಿ' ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಆಶಯ ಭಾಷಣ ಮಾಡಿದ ಅವರು, `ಪ್ರಸ್ತುತ ಸಾಮಾಜಿಕ ವ್ಯವಸ್ಥೆ ದಿನದಿಂದ ದಿನಕ್ಕೆ ಅಮಾನವೀಯವಾಗುತ್ತಿದ್ದು, ಎಲ್ಲವನ್ನೂ ಲಾಭದ ತಕ್ಕಡಿಯಲ್ಲಿಟ್ಟು ತೂಗಲಾಗುತ್ತಿದೆ.