ನವದೆಹಲಿ (ಪಿಟಿಐ): ಮಾಜಿ ದೂರಸಂಪರ್ಕ ಸಚಿವ ರಾಜಾ ಅವರನ್ನು ದೆಹಲಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಗುರುವಾರ ಒಪ್ಪಿಸಿದ್ದು, ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.
ತನಿಖಾ ಸಂಸ್ಥೆ ಸಿಬಿಐ ರಾಜಾ ಅವರನ್ನು ವಿಚಾರಣೆಗೊಳಪಡಿಸುವ ಯಾವುದೇ ಮನವಿ ಮಾಡದ ಕಾರಣ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ.ಸಯಾನಿ ಅವರು ಮಾರ್ಚ್ 3 ರ ವರೆಗೆ ರಾಜಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ರಾಜಾ ಅವರಿಗೆ ಮನೆ ಊಟ ಹಾಗೂ ಔಷಧಿಗಳನ್ನು ನೀಡಬೇಕೆಂದು ಅವರ ವಕೀಲರು ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಈ ಸಂಬಂಧ ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಫೆಬ್ರುವರಿ 2 ರಂದು 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಜಾ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿತ್ತು.