1952ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ ಆಗಿದ್ದರು. ನಂತರ 1957, 1967, 1972, 1983 ಮತ್ತು 1985ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1962ರಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಪ್ರಥಮ ಬಾರಿಗೆ ಸಂಸತ್ ಪ್ರವೇಶಿಸಿದ್ದರು. ವೀರೇಂದ್ರ ಪಾಟೀಲ, ದೇವರಾಜ ಅರಸ್ ಮತ್ತು ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಪಾಟೀಲರಿಗೆ ಮೂವರು ಪುತ್ರರಿದ್ದಾರೆ. ಅವರಲ್ಲಿ ಅಮರಸಿಂಹ ಪಾಟೀಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದರಾಗಿದ್ದು, ಶಿಕ್ಷಣ ಪ್ರಸಾರಕ ಮಂಡಳಿಯ ಶಿಕ್ಷಣ ಸಂಸ್ಥೆಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಇನ್ನೊಬ್ಬ ಪುತ್ರ ವಿವೇಕರಾವ್ ಪಾಟೀಲ ಸಹಕಾರಿ ಧುರೀಣ. ಮತ್ತೊಬ್ಬ ಪುತ್ರ ಪ್ರತಾಪ ರಾವ್ ಪಾಟೀಲ ಇಲ್ಲಿನ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ.