ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಟ, ಮಂತ್ರಗಳಿಗೆ ಹೆದರಬಾರದು: ಪೇಜಾವರ ಶ್ರೀ ಸಲಹೆ

Last Updated 3 ಫೆಬ್ರುವರಿ 2011, 18:00 IST
ಅಕ್ಷರ ಗಾತ್ರ


ರಾಯಚೂರು: ಜನತೆಯ ಹಿತಕ್ಕಾಗಿ ಒಳ್ಳೆಯ ಕೆಲಸ ಮಾಡುವವರು ಮಾಟ ಮಂತ್ರಕ್ಕೆ ಹೆದರಬಾರದು ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ನುಡಿದರು.

ಇಲ್ಲಿನ ಮುಂಗ್ಲಿ ಪ್ರಾಣದೇವರ ದೇವಸ್ಥಾನದಲ್ಲಿ ನಡೆಯುತ್ತಿರುವ ಹರಿದಾಸ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಮಾಟ-ಮಂತ್ರದಿಂದ ಏನೂ ಆಗುವುದಿಲ್ಲ. ಯಾವುದೇ ಹಾನಿಯೂ ಇಲ್ಲ. ಅಭಿವೃದ್ಧಿ ಮತ್ತು ಕರ್ತವ್ಯನಿಷ್ಠೆಯಿಂದ ಜನಸೇವಾ ಕಾರ್ಯದಲ್ಲಿ ನಿರತರಾಗಬೇಕು. ಮುಖ್ಯಮಂತ್ರಿಗಳು ಈ ದಿಸೆಯಲ್ಲಿ ನಡೆಯಬೇಕು” ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT