ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಕ್ಷೇತ್ರವಾಗಿ ಕೊಪ್ಪಳ ಅಭಿವೃದ್ಧಿ: ಮುಖ್ಯಮಂತ್ರಿ ಘೋಷಣೆ

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಕೊಪ್ಪಳ: ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.

ಅವರು ನಗರದಲ್ಲಿ ಶುಕ್ರವಾರ ಉಪ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ `ರೋಡ್ ಶೋ~ ಕಾರ್ಯಕ್ರಮದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

`ಪಕ್ಷದ ಅಭ್ಯರ್ಥಿ ಸಂಗಣ್ಣ ಕರಡಿ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿರುವಂತೆ ಮಾಡುವುದು ನಿಮ್ಮ ಜವಾಬ್ದಾರಿ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಸರ್ಕಾರವೂ ಸ್ಪಂದಿಸಲಿದೆ~ ಎಂದು ಭರವಸೆ ನೀಡಿದರು.

ಸಂಸದ ಅನಂತ ಕುಮಾರ್ ಸಹ ಮಾತನಾಡಿದರು.

ಅಭ್ಯರ್ಥಿ ಸಂಗಣ್ಣ ಕರಡಿ, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ಲಕ್ಷ್ಮಣ ಸವದಿ, ವಿ.ಸೋಮಣ್ಣ, ಸಂಸದ ಶಿವರಾಮಗೌಡ, ಶಾಸಕರಾದ ಪರಣ್ಣ ಮುನವಳ್ಳಿ, ಎನ್. ಶಂಕ್ರಪ್ಪ, ಮುಖಂಡರಾದ ಸಿ.ಟಿ.ರವಿ, ಕೆಎಚ್‌ಡಿಸಿ ಅಧ್ಯಕ್ಷ ಎನ್.ಡಿ.ಲಕ್ಷ್ಮೀನಾರಾಯಣ ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT