ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ವರದಿ ಅಲ್ಲಗಳೆದ ನಿತೀಶ್

Last Updated 16 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಮುಂದಿನ ಚುನಾವಣೆಯಲ್ಲಿ ಬಿಜೆಪಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಂಬಿಸಿದರೆ, ಬಿಜೆಪಿಯೊಂದಿಗೆ ಸಖ್ಯ ತೊರೆಯುವುದಾಗಿ~ ಮಾಧ್ಯಮ ಗಳಲ್ಲಿ ಪ್ರಕಟವಾಗಿರುವ ತಮ್ಮ ಹೇಳಿಕೆ ಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಲ್ಲಗಳೆದಿದ್ದಾರೆ.

`ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ನಾನು ಯಾವುದೇ ನಿಯತಕಾಲಿಕೆಗೆ ಸಂದರ್ಶನ ನೀಡಿಲ್ಲ~ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

ಜೆಡಿ(ಯು) ನಾಯಕ ಶರದ್ ಯಾದವ್ ಕೂಡ ವರದಿಗಳನ್ನು ತಳ್ಳಿ ಹಾಕಿದ್ದಾರೆ. `ಅವರನ್ನು ಬಹಳ ವರ್ಷಗಳಿಂದ ಬಲ್ಲೆ. ಹಾಗೆ ಮಾತನಾಡಲು ಸಾಧ್ಯವಿಲ್ಲ~ ಎಂದು ತಿಳಿಸಿದ್ದಾರೆ.

ಮೋದಿ ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಜೆಪಿ ಪ್ರಕಟಿಸಿದರೆ, ಅದರ ಸಖ್ಯ ತೊರೆ ಯುವುದಾಗಿ  ನಿತೀಶ್ ಕುಮಾರ್  ಹೇಳಿದ್ದಾರೆ ಎಂದು ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT