ನವದೆಹಲಿ (ಪಿಟಿಐ): `ಮುಂದಿನ ಚುನಾವಣೆಯಲ್ಲಿ ಬಿಜೆಪಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಂಬಿಸಿದರೆ, ಬಿಜೆಪಿಯೊಂದಿಗೆ ಸಖ್ಯ ತೊರೆಯುವುದಾಗಿ~ ಮಾಧ್ಯಮ ಗಳಲ್ಲಿ ಪ್ರಕಟವಾಗಿರುವ ತಮ್ಮ ಹೇಳಿಕೆ ಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಲ್ಲಗಳೆದಿದ್ದಾರೆ.
`ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ನಾನು ಯಾವುದೇ ನಿಯತಕಾಲಿಕೆಗೆ ಸಂದರ್ಶನ ನೀಡಿಲ್ಲ~ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.
ಜೆಡಿ(ಯು) ನಾಯಕ ಶರದ್ ಯಾದವ್ ಕೂಡ ವರದಿಗಳನ್ನು ತಳ್ಳಿ ಹಾಕಿದ್ದಾರೆ. `ಅವರನ್ನು ಬಹಳ ವರ್ಷಗಳಿಂದ ಬಲ್ಲೆ. ಹಾಗೆ ಮಾತನಾಡಲು ಸಾಧ್ಯವಿಲ್ಲ~ ಎಂದು ತಿಳಿಸಿದ್ದಾರೆ.
ಮೋದಿ ಪ್ರಧಾನಿ ಸ್ಥಾನದ ಅಭ್ಯರ್ಥಿ ಎಂದು ಬಿಜೆಪಿ ಪ್ರಕಟಿಸಿದರೆ, ಅದರ ಸಖ್ಯ ತೊರೆ ಯುವುದಾಗಿ ನಿತೀಶ್ ಕುಮಾರ್ ಹೇಳಿದ್ದಾರೆ ಎಂದು ವರದಿ ಪ್ರಕಟವಾಗಿತ್ತು.