ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನ್ವಿ: ಗ್ರಾಪಂ ಸದಸ್ಯರಿಗೆ ಕಾರ್ಯಾಗಾರ

Last Updated 14 ಏಪ್ರಿಲ್ 2011, 7:20 IST
ಅಕ್ಷರ ಗಾತ್ರ

ಮಾನ್ವಿ: ಇಲ್ಲಿನ ಕರ್ನಾಟಕ ಸಭಾಂಗಣದಲ್ಲಿ ಹಾಲ್‌ನಲ್ಲಿ ಇತ್ತೀಚೆಗೆ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ವತಿಯಿಂದ ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಯಚೂರು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಸಂಘಟನೆಯ ಜಿಲ್ಲಾ ಸಂಚಾಲಕ ಶಮೀಮುದ್ದೀನ್ ಹೈದರ್‌ಸಾಬ ಮಾತನಾಡಿ, ಹಣಕ್ಕಾಗಿ ಎಲ್ಲವನ್ನೂ ಮಾರಿಕೊಳ್ಳುವ ಇಂದಿನ ದಿನಗಳಲ್ಲಿ ನೈತಿಕ ಮೌಲ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ. ನೂತನ ಪಂಚಾಯಿತಿ ಸದಸ್ಯರು ಸಮಾಜದ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ದೊರಕುವಂತೆ ಮಾಡಲು ಶ್ರಮಿಸಬೇಕು. ಸಿಕ್ಕಿರುವ ಅವಕಾಶವನ್ನು ಬಡವರ ಪರವಾಗಿ ದುಡಿಯಲು ಬಳಸಿಕೊಳ್ಳಬೇಕು ಎಂದರು.

ಜನಾಬ್ ಮಿರ್ಝಾ ಬೇಗ್, ಹುಸೇನ್ ಬಾಷ ಮಾತನಾಡಿ, ಸರ್ಕಾರದ ಸವಲತ್ತುಗಳು ಜನರಿಗೆ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು. ಶಿಕ್ಷಕ ಸಬ್ಜಲಿ ಪವಿತ್ರ ಕುರಾನ್ ಪ್ರವಚನ ಮಾಡಿದರು. ಜಮಾತೆ ಇಸ್ಲಾಮಿ ಹಿಂದ್ ಸ್ಥಳೀಯ ಘಟಕದ ಅಧ್ಯಕ್ಷ ಮೌಲಾನಾ ಅನ್ವರ್ ಪಾಷಾ ಉಮರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮೌಲಾಸಾಬ ಪರಾಪುರ ನಿರೂಪಿಸಿದರು. ದಾವೂದ್ ಸಿದ್ದಿಕಿ ಸಾಬ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT