ಬೆಂಗಳೂರು: ಕೆ.ಆರ್.ಮಾರುಕಟ್ಟೆ ಅಕ್ಕಪಕ್ಕದ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿರುವ ಬಿಬಿಎಂಪಿ, ಪಾದ ಚಾರಿ ಮಾರ್ಗದಲ್ಲಿದ್ದ ಗ್ರಿಲ್ಗಳನ್ನು ಸೋಮವಾರ ರಾತ್ರಿ ತೆರವುಗೊಳಿಸಿದೆ.
ರಾತ್ರಿ ಎಂಟು ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದ ಬಿಬಿಎಂಪಿ ಸಿಬ್ಬಂದಿ, ಪಾದಚಾರಿ ಮಾರ್ಗದಲ್ಲಿದ್ದ ಗ್ರಿಲ್ಗಳನ್ನು ಜೆಸಿಬಿ ಯಂತ್ರದ ಸಹಾಯದಿಂದ ತೆರವುಗೊಳಿಸಿದರು. ಇದೇ ಸಂದರ್ಭದಲ್ಲಿ ಮಾರುಕಟ್ಟೆಯ ಎಡಭಾಗದಲ್ಲಿದ್ದ ಹಳೆಯ ಕಟ್ಟಡವನ್ನು ಕೆಡವಲಾಯಿತು. ಈ ವೇಳೆ ಕೆಲ ವ್ಯಾಪಾರಿಗಳು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು.
‘ಪಾದಚಾರಿ ಮಾರ್ಗ ಹಾಗೂ ಗ್ರಿಲ್ಗಳನ್ನು ತೆರವುಗೊಳಿಸಿ ರಸ್ತೆ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಬಿಬಿಎಂಪಿ ಮುಂದಾಗಿದೆ. ನಮ್ಮ ಗಮನಕ್ಕೂ ತರದೆ ಗ್ರಿಲ್ಗಳನ್ನು ತೆರವುಗೊಳಿಸಲಾಗುತ್ತಿದೆ. ಹೀಗೆ ರಾತ್ರಿ ಏಕಾಏಕಿ ಕಾರ್ಯಾಚರಣೆ ನಡೆಸಿ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವುದು ಮಾನವೀ ಯತೆಯಲ್ಲ’ ಎಂದು ವ್ಯಾಪಾರಿ ಗೋಪಾಲ್ ದೂರಿದರು.
‘ಗ್ರಿಲ್ ತೆರವುಗೊಳಿಸಿ, ರಸ್ತೆಗೆ ಕಾಂಕ್ರಿಟ್ ಹಾಕಲಾಗುವುದು. ಮಾರುಕಟ್ಟೆ ಪಕ್ಕದಲ್ಲೇ ಇದ್ದ ಎರಡು ಮಹಡಿಗಳ ಹಳೆಯ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಈ ಕಾರಣಕ್ಕೆ ಅದನ್ನು ಕೆಡವಲಾಗಿದೆ.ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ತೊಂದರೆ-ಯಿಲ್ಲ. ಬೀದಿ ಬದಿ ವ್ಯಾಪಾ ರಿಗಳನ್ನು ಎತ್ತಂಗಡಿ ಮಾಡುವ ಉದ್ದೇಶ ಪಾಲಿಕೆಗಿಲ್ಲ. ಹೀಗಾಗಿ ವ್ಯಾಪಾರಿಗಳು ಆತಂಕ ಪಡಬಾರದು’ ಎಂದು ಮೇಯರ್ ಬಿ.ಎಸ್.ಸತ್ಯನಾರಾಯಣ ತಿಳಿಸಿದರು.