ಬೆಂಗಳೂರು: ಡಾ.ವಿ.ಎಸ್. ಆಚಾರ್ಯ ಅವರು ಬಿಜೆಪಿಗೆ ಮಾರ್ಗದರ್ಶಕರಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಣ್ಣಿಸಿದರು.
ಆಚಾರ್ಯ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, `ಪಕ್ಷದಲ್ಲಿ ಯಾರೇ ತಪ್ಪು ಮಾಡಿದರೂ, ಅದನ್ನು ನಿಷ್ಠುರವಾಗಿ ಹೇಳುತ್ತಿದ್ದರು~ ಎಂದು ಸ್ಮರಿಸಿದರು. ಆಚಾರ್ಯರ ಪಾರ್ಥಿವ ಶರೀರದ ಪಕ್ಕದಲ್ಲಿ ಕುಳಿತಿದ್ದ ಯಡಿಯೂರಪ್ಪ ಸ್ವಲ್ಪ ಹೊತ್ತು ಮೌನವಾಗಿದ್ದರು. ಯಾರೊಂದಿಗೂ ಮಾತನಾಡುವ ಸ್ಥಿತಿಯಲ್ಲಿ ಅವರು ಇರಲಿಲ್ಲ.