ನವದೆಹಲಿ (ಪಿಟಿಐ): ಕಾಮನ್ವೆಲ್ತ್ ಕ್ರೀಡಾಕೂಟದ ಬೀದಿ ದೀಪ ಅಳವಡಿಕೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಾನಗರಪಾಲಿಕೆಯ ನಾಲ್ವರು ಅಧಿಕಾರಿಗಳು ಸೇರಿದಂತೆ ಏಳು ಮಂದಿ ಮತ್ತು ಕೆಲವು ಸಂಸ್ಥೆಗಳ ವಿರುದ್ಧ ಮಾರ್ಚ್ 1 ರಂದು ಸಿಬಿಐ ವಿಶೇಷ ನ್ಯಾಯಾಲಯವು ದೋಷಾರೋಪ ಪಟ್ಟಿ ಸಿದ್ಧಪಡಿಸಲಿದೆ.
ಮೇಲ್ನೋಟಕ್ಕೆ ಆಪಾದನೆ ಸರಿ ಎಂದು ಕಂಡು ಬಂದಿರುವುದರಿಂದ ಎಲ್ಲರ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪ್ರದೀಪ್ ಛಡ್ಡಾ ಅವರು ತಿಳಿಸಿದ್ದಾರೆ.