ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾರ್ಚ್ 21ರಂದು ರಾಜ್ಯದ ಮುಂದಿನ ಆರ್ಥಿಕ ವರ್ಷದ ಬಜೆಟ್ ಮಂಡಿಸುವರು ಎಂದು ಕಾನೂನು ಸಚಿವ ಎಸ್.ಸುರೇಶಕುಮಾರ್ ತಿಳಿಸಿದರು.
`ಬಜೆಟ್ ಅಧಿವೇಶನ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ಣಗೊಂಡ ಬಳಿಕ ಬಜೆಟ್ ಮಂಡಿಸುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಮಾ. 21ರಂದು ಬಜೆಟ್ ಮಂಡನೆಗೆ ತೀರ್ಮಾನಿಸಲಾಯಿತು~ ಎಂದು ಸಂಪುಟ ಸಭೆ ಬಳಿಕ ಪತ್ರಕರ್ತರಿಗೆ ಅವರು ವಿವರಿಸಿದರು.