ಬೆಂಗಳೂರು:ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ಬಜೆಟ್ ಅಧಿವೇಶನ ಮಾರ್ಚ್ 18ರ ನಂತರ ನಡೆಯುವ ಸಾಧ್ಯತೆ ಇದೆ.
ಮಾರ್ಚ್ 9ರಿಂದ ಬಜೆಟ್ ಅಧಿವೇಶನ ನಡೆಸುವ ಇಂಗಿತವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಕ್ತಪಡಿಸಿದ್ದರು. ಆದರೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾರ್ಚ್ 18ಕ್ಕೆ ಮತದಾನ ನಡೆಯಲಿದೆ.