ನವದೆಹಲಿ (ಪಿಟಿಐ): ಮಾಲೆಗಾಂವ್ನಲ್ಲಿ 2008ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸೇನಾ ಅಧಿಕಾರಿ ಶ್ರೀಕಾಂತ್ ಪುರೋಹಿತ್, ಪ್ರಗ್ಯಾ ಠಾಕೂರ್ ಮತ್ತು ಇತರರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ತಮ್ಮ ಕಕ್ಷೀದಾರರು 4 ವರ್ಷ ಗಳಿಂದ ಜೈಲಿನಲ್ಲಿದ್ದಾರೆ. ಅವರ ಅರ್ಜಿ ಗಳನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ವಕೀಲ ಯು. ಆರ್. ಲಲಿತ್ ವಾದಿಸಿದರೂ `ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ~ ಎಂದು ನ್ಯಾಯಮೂರ್ತಿ ಗಳಾದ ಎಚ್. ಎಲ್. ದತ್ತು ಮತ್ತು ಸಿ. ಕೆ. ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿತು.