ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸುತ್ತಿರುವ ವರ್ಚಸ್ಸು...

Last Updated 18 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಜನರನ್ನು ಸ್ವಾವಲಂಬಿಯಾಗಿ ಮಾಡುವ ಯೋಜನೆ­ಗಳಿಗಿಂತ,  ಸೋಮಾರಿಗಳನ್ನಾಗಿ ಮಾಡುವ ಯೋಜನೆಗಳು ರಾಜ್ಯದಲ್ಲಿ ಹೆಚ್ಚುತ್ತಿ­ರುವುದು ವಿಷಾದನೀಯ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಶುರು­ವಿ­ನಲ್ಲಿ ತಮ್ಮ ಕಾರ್ಯಶೈಲಿಯಿಂದ ಜನರನ್ನು ರೋಮಾಂಚನಗೊಳಿಸಿದರು. ಹಿಂದಿನ ಮುಖ್ಯ­ಮಂತ್ರಿ­ಗಳಂತೆ ಮಠ, ಮಂದಿರಗಳಿಗೆ ಎಡತಾಕದೆ ಸಾಹಿತಿ, ಚಿಂತಕರನ್ನು ಭೇಟಿಯಾದಾಗ ಅವರ ಬಗ್ಗೆ ಅಭಿಮಾನ ಮೂಡಿತ್ತು. ಆದರೆ ­ಕ್ರಮೇಣ ಅವರ ವರ್ಚಸ್ಸು  ಮಾಸಲಾರಂಭಿಸಿದೆ.

ಶಾಲಾ ಮಕ್ಕಳಿಗೆ ಉಚಿತ ಪುಸ್ತಕ– ಸಮವಸ್ತ್ರ, ಬಿಸಿಯೂಟ ನೀಡಲಾಗುತ್ತಿದೆ. ಆದರೆ,  ಎಷ್ಟೋ ಶಾಲೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಶಿಕ್ಷಕರಿಲ್ಲ. ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸಬೇಕಾದ ಇತರೆ ಹಲವು  ಇಲಾಖೆಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಲ್ಲ. ಖಾಲಿ ಹುದ್ದೆ ತುಂಬುವ ಬಗ್ಗೆ ಸರ್ಕಾರ ಗಮನವನ್ನೇ ಹರಿಸಿಲ್ಲ. ಇದು ಯುವಜನತೆಯಲ್ಲಿ ನಿರಾಶೆ ಮೂಡಿಸಿದೆ.

ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗ­ಗಳಲ್ಲಿ ಮಾತ್ರ ಬಡವರಿದ್ದಾರೆ ಎಂದು ಭಾವಿಸಿ, ಯೋಜನೆಗಳನ್ನು ರೂಪಿಸುವುದು ಸರಿಯಲ್ಲ. ವಿರೋಧ ಪಕ್ಷದಲ್ಲಿದ್ದಾಗ ರೈತರ ಪರವಾಗಿ ತೋರಿದ ಕಾಳಜಿ ಈಗ ಕಾಣುತ್ತಿಲ್ಲ. ಇನ್ನಾದರೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಸೂಕ್ತ ಕಾರ್ಯಕ್ರಮ ರೂಪಿಸಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT