ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರರ ಮೇಲೆ ದಾಳಿ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಮೇಶ್ವರಂ (ಪಿಟಿಐ): ಶ್ರೀಲಂಕಾ ನೌಕಾದಳ ತಮಿಳುನಾಡಿನ 15 ಮೀನುಗಾರರ ಮೇಲೆ ಭಾನುವಾರ ಬೆಳಿಗ್ಗೆ ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಕಚ್ಚತೀವು ಬಳಿಯ ಭಾರತೀಯ ಮೀನುಗಾರಿಕಾ ವಲಯದಲ್ಲಿ ಈ ಘಟನೆ ನಡೆದಿದೆ.  

 ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ನಡೆಸುತ್ತಿರುವ ದಾಳಿಗಳನ್ನು ಭಾರತದ ವಿರುದ್ಧದ ಆಕ್ರಮಣ ಎಂದು ಪರಿಗಣಿಸುವಂತೆ ಮುಖ್ಯಮಂತ್ರಿ ಜಯಲಲಿತಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಮರುದಿನವೇ ಇಂತಹ ಘಟನೆ ನಡೆದಿದೆ.
 
ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್ ಅವರು ಕೊಲಂಬೊಗೆ ಶನಿವಾರ ಮೂರು ದಿನಗಳ ಭೇಟಿ ನೀಡಿದ ಸಂದರ್ಭದಲ್ಲಿ ಭಾರತೀಯ ಮೀನುಗಾರರ ಮೇಲೆ ದಾಳಿವಿಷಯವನ್ನು ಅಲ್ಲಿನ ಪ್ರಮುಖರೊಂದಿಗೆ ಗಂಭೀರವಾಗಿ ಪ್ರಸ್ತಾಪಿಸುವಂತೆಯೂ ಜಯಲಲಿತಾ ಒತ್ತಾಯಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT