ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಕ್ಷೀಣ

Last Updated 20 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. 

ಉತ್ತರ ಕನ್ನಡ ಜಿಲ್ಲೆಯ ನಿಲ್ಕುಂದದಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಅಂಕೋಲಾ 7, ಕೊಲ್ಲೂರು, ಗೇರುಸೊಪ್ಪ 6, ಕದ್ರಾ 5, ಜಗಳಪೇಟೆ, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ), ಖಾನಾಪುರ, ಆಗುಂಬೆ, ಕಮ್ಮರಡಿ 4, ಶಿರಸಿ, ಯಲ್ಲಾಪುರ, ಗುರುಮಿಟ್ಕಲ್ 3, ಮಾಣಿ, ಧರ್ಮಸ್ಥಳ, ಸಿದ್ದಾಪುರ (ಉಡುಪಿ ಜಿಲ್ಲೆ), ಕಾರವಾರ, ಬನವಾಸಿ, ಜೋಯಿಡಾ, ಔರಾದ, ಲಿಂಗನಮಕ್ಕಿ, ಹೊಸನಗರ, ಹುಂಚದಕಟ್ಟೆ, ತೀರ್ಥಹಳ್ಳಿ, ಶೃಂಗೇರಿ, ಕೊಟ್ಟಿಗೆಹಾರ, ಎನ್.ಆರ್.ಪುರ 2, ಬೆಳ್ತಂಗಡಿ, ಉಪ್ಪನಂಗಡಿ, ಸುಬ್ರಹ್ಮಣ್ಯ, ಸುಳ್ಯ, ಕೋಟ, ಕಾರ್ಕಳ, ಕುಂದಾಪುರ, ಭಟ್ಕಳ, ಕುಮಟಾ, ಮಂಚಿಕೇರಿ, ಸೊರಬಗಳಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ದಕ್ಷಿಣ ಘಟ್ಟ ಪ್ರದೇಶದ ಹಲವು ಪ್ರದೇಶಗಳು ಸೇರಿದಂತೆ ಉತ್ತರ ಒಳನಾಡಿನ ಕೆಲವು ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT