ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದೆ. ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಕೊಲ್ಲೂರು, ಆಗುಂಬೆಯಲ್ಲಿ 20 ಸೆಂ.ಮೀ. ಮಳೆಯಾಗಿದೆ. ಸುಬ್ರಹ್ಮಣ್ಯ, ಸಿದ್ದಾಪುರ, ಗೇರುಸೊಪ್ಪ 15, ಮಡಿಕೇರಿ 12, ಬೆಳ್ತಂಗಡಿ, ಕುಮಟಾ 11, ಧರ್ಮಸ್ಥಳ, ಕಾರ್ಕಳ, ಕ್ಯಾಸಲ್ ರಾಕ್, ಶೃಂಗೇರಿ 10, ಅಂಕೋಲ, ಲಿಂಗನಮಕ್ಕಿ, ಕಮ್ಮರಡಿ 9, ಪುತ್ತೂರು, ಉಪ್ಪಿನಂಗಡಿ, ಸುಳ್ಯ, ಹೊನ್ನಾವರ, ಕಾರವಾರ, ಭಾಗಮಂಡಲ, ತಾಳಗುಪ್ಪ 8, ಕೋಟ 7, ಮಾಣಿ, ಭಟ್ಕಳ, ಕದ್ರಾ, ತೀರ್ಥಹಳ್ಳಿಯಲ್ಲಿ ತಲಾ 6 ಸೆಂ.ಮೀ. ಮಳೆಯಾಗಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿಯ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.