ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು: ವಾಡಿಕೆಗಿಂತ ಕಡಿಮೆ ನಿರೀಕ್ಷೆ

Last Updated 21 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತಲೂ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಹೊಸ ವರದಿ ತಿಳಿಸಿದೆ.ಆದರೆ ಇದರಿಂದ ಕಳವಳಗೊಳ್ಳಬೇಕಾದ ಅಗತ್ಯವಿಲ್ಲ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪವನ್ ಕುಮಾರ್ ಬನ್ಸಾಲ್ ವರದಿಗಾರರಿಗೆ ತಿಳಿಸಿದರು.

ಸಾಮಾನ್ಯವಾಗಿ ಜೂನ್ 1ರಂದು ಪ್ರವೇಶಿಸುವ ನೈರುತ್ಯ ಮುಂಗಾರು ಈ ವರ್ಷ ಮೂರು ದಿನ ಮುಂಚಿತವಾಗಿ ಮೇ 29ರಂದು ಕೇರಳವನ್ನು ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ಪರಿಷ್ಕೃತ ವರದಿಯನ್ನು ಬಿಡುಗಡೆಗೊಳಿಸಲಾಗಿದೆ.

ಈ ಬಾರಿ ಮುಂಗಾರು ಸಾಧಾರಣವಾಗಿರುತ್ತದೆಯಲ್ಲದೆ ದೀರ್ಘ ಅವಧಿಯ ಸರಾಸರಿ (ಎಲ್‌ಪಿಎ)ಯ ಶೇ 98ರಷ್ಟು ಮಳೆ ಸುರಿಯಲಿದೆ ಎಂದು ಏಪ್ರಿಲ್‌ನಲ್ಲಿ ಹೊರಬಂದ ಹವಾಮಾನ ವರದಿಯಲ್ಲಿ ತಿಳಿಸಲಾಗಿತ್ತು.

ಆದರೆ ಮುಂಗಾರು ಕ್ಷೀಣಿಸುವುದರಿಂದ ಗಂಭೀರ ಪರಿಣಾಮವನ್ನು ಎದುರಿಸಬೇಕಾಗಬಹುದು ಎಂಬ ಭೀತಿಯನ್ನು ಬನ್ಸಾಲ್ ಅಲ್ಲಗಳೆದಿದ್ದಾರೆ. ಇದುವರೆಗೂ ರಾಷ್ಟ್ರದೆಲ್ಲೆಡೆ ಮುಂಗಾರು ಒಂದೇ ರೀತಿಯಲ್ಲಿಯೇ ಸುರಿದಿದ್ದು ಕಳವಳಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT