ಕಾರ್ಯಕ್ರಮದಲ್ಲಿ ವಿಮರ್ಶಕ ಡಾ.ಎಚ್.ಎಸ್.ರಾಘವೇಂದ್ರರಾವ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಎನ್.ವೆಂಕಟರಾವ್, ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಕನ್ನಡ ಪರೀಕ್ಷಾ ಮಂಡಲಿಯ ಅಧ್ಯಕ್ಷೆ ಪ್ರೊ.ಸಿ.ಪ್ರಭಾವತಿ, ಸಂಘದ ಅಧ್ಯಕ್ಷ ಡಾ.ಬೈರಮಂಗಲ ರಾಮೇಗೌಡ, ಕಾರ್ಯದರ್ಶಿ ಶಾಂತರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.