ಬೆಂಗಳೂರು: ಮುಂಬರುವ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸುವಂತೆ ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮನವಿ ಮಾಡಿದೆ.
ಹಾವೇರಿ ಜಿಲ್ಲೆಯಲ್ಲಿ ಇದುವರೆಗೆ ಒಮ್ಮೆಯೂ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಮುಂದಿನ ವರ್ಷವಾದರೂ ಸಮ್ಮೇಳನ ನಡೆಸಿ ಎಂದು ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಶಿಡ್ಲಾಪುರ, ಕೋಶಾಧ್ಯಕ್ಷ ಪಿ.ಡಿ.ಶಿರೂರ ಸೇರಿದಂತೆ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.