ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವರ್ಷ ಗುರುಭವನ ನಿರ್ಮಾಣ

Last Updated 6 ಸೆಪ್ಟೆಂಬರ್ 2011, 10:15 IST
ಅಕ್ಷರ ಗಾತ್ರ

ಮುಳಬಾಗಲು: `2012ರ ಶಿಕ್ಷಕರ ದಿನಾಚರಣೆ ವೇಳೆಗೆ ಶಿಕ್ಷಕರ ಗುರುಭವನ ನಿರ್ಮಾಣ ಮಾಡುವುದಾಗಿ~  ಶಾಸಕ ಅಮರೇಶ್ ಭರವಸೆ ನೀಡಿದರು. ಪಟ್ಟಣದಲ್ಲಿ ಸೋಮವಾರ ನಡೆದ ಶಿಕ್ಷಕರ  ದಿನಾಚರಣೆಯಲ್ಲಿ ಮಾತನಾಡಿದರು.

`ಶಿಕ್ಷಕರ ಸೇವೆಗೆ ಬೆಲೆ ಕಟ್ಟಲಾಗುವುದಿಲ್ಲ. ಅಂತಹ ಸೇವೆ ನಮ್ಮನ್ನು ಉನ್ನತ ಸ್ಥಿತಿಗೆ ತರುತ್ತದೆ~ ಎಂದು ಹೇಳಿದರು. ನಿವೃತ್ತರಾದ ಶಾಲಾ ಶಿಕ್ಷಕರನ್ನು ಇದೇ ವೇಳೆ ಸನ್ಮಾನಿಸಲಾಯಿತು. ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಮನವಿ ಸ್ವೀಕರಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ  ಸರಸಮ್ಮ, ಉಪಾಧ್ಯಕ್ಷ   ಎಂ.ಎಸ್.ಶ್ರೀನಿವಾಸರೆಡ್ಡಿ, ಮಾಜಿ ಉಪಾಧ್ಯಕ್ಷ ಎನ್.ವೆಂಕಟೇಶಗೌಡ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಜಗನ್ನಾಥ್ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಜಗದೀಶ್, ಖಜಾಂಚಿ ರಾಜಕುಮಾರ್, ಕಾರ್ಗಿಲ್ ವೆಂಕಟೇಶ್, ಅಮರನಾಥ್ ಕ್ಷೇತ್ರಶಿಕ್ಷಣಾಧಿಕಾರಿ ವಿಕ್ಟರ್  ಇದ್ದರು.ಚಾಂದ್‌ಪಾಷ ನಿರೂಪಿಸಿದರು. ಇದೇ ವೇಳೆ ಸರ್ವಪಲ್ಲಿ ರಾಧಾಕಷ್ಣನ್ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT