ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಸಮ್ಮೇಳನ ಹಾವೇರಿಯಲ್ಲಿ...

Last Updated 8 ಜನವರಿ 2014, 19:30 IST
ಅಕ್ಷರ ಗಾತ್ರ

ಮಡಿಕೇರಿ:  81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯು ಬುಧವಾರ ಇಲ್ಲಿ ಸಭೆ ಸೇರಿ, ಹಾವೇರಿಯಲ್ಲಿ ಮುಂದಿನ ಸಮ್ಮೇಳನ ನಡೆಸಲು ನಿರ್ಧರಿಸಿತು.
ಇದಕ್ಕೂ ಮೊದಲು ಹಾಸನ, ಚಾಮರಾಜನಗರ, ಗುಲ್ಬರ್ಗ ಹಾಗೂ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚಿಸಲಾಯಿತು. ಆದರೆ, ಕಾರ್ಯಕಾರಿ ಸಮಿತಿಯ ಅನೇಕ ಪದಾಧಿಕಾರಿಗಳು ಹಾವೇರಿಗೆ ಒಲವು ವ್ಯಕ್ತಪಡಿಸಿದರು. ಅಂತಿಮವಾಗಿ ಹಾವೇರಿಯಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.

ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ‘ಸಮ್ಮೇಳನವನ್ನು ಈ ವರ್ಷದ ಡಿಸೆಂಬರ್‌ ತಿಂಗಳಲ್ಲಿ ಇಲ್ಲವೆ 2015ರ ಜನವರಿಯಲ್ಲಿ ಆಯೋಜಿಸಲಾಗುತ್ತದೆ. ಈ ಕುರಿತು ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ’ ಎಂದು ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಗುರುಶಾಂತಪ್ಪ ಮಾಸಣಗಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT