ಬೆಂಗಳೂರು: `ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಐವರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಇವರಿಂದ ಬಿಜೆಪಿ ಶಾಸಕರಿಗೆ ಏನೇನೂ ಅನುಕೂಲ ಆಗುತ್ತಿಲ್ಲ~
- ಹೀಗೆ ವಾಗ್ದಾಳಿ ನಡೆಸಿದ್ದು ಶಾಸಕ ಎಚ್.ಹಾಲಪ್ಪ ಮತ್ತು ಸರ್ಕಾರದ ಮುಖ್ಯ ಸಚೇತಕ ಸಿದ್ದು ಸವದಿ.
ಮಾಜಿ ಮುಖ್ಯಮಂತರಿ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡುತ್ತಾ ಈ ಆರೋಪ ಹೊರಿಸಿದರು.