ಬೆಂಗಳೂರು: ಅಮರನಾಥ ಎಂಬ ಬಾಲಕನ ಮೂತ್ರಪಿಂಡದ ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಿದ್ದಾರೆ.
ಹುಬ್ಬಳ್ಳಿ ಮೂಲದ ಬಾಲಕ ಅಮರನಾಥನ ಮೂತ್ರಪಿಂಡಗಳು ವಿಫಲಗೊಂಡಿವೆ. ಈ ಹಿನ್ನೆಲೆಯಲ್ಲಿ ಆತನ ತಾಯಿ ತನ್ನ ಒಂದು ಮೂತ್ರಪಿಂಡವನ್ನು ಅಮರನಾಥನಿಗೆ ನೀಡಲು ಮುಂದಾಗಿದ್ದರು. ಆದರೆ ಬಡ ಕುಟುಂಬದ ಅವರಿಗೆ ಮೂತ್ರಪಿಂಡ ಬದಲಿಸುವ ಶಸ್ತ್ರಚಿಕಿತ್ಸೆಗೆ ಬೇಕಾದ ಹಣ ಹೊಂದಿಸುವ ಸಾಮರ್ಥ್ಯ ಇರಲಿಲ್ಲ.
ಈ ವಿಷಯ ತಿಳಿದ ಸದಾನಂದ ಗೌಡರು ಶಸ್ತ್ರಚಿಕಿತ್ಸೆಯ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸುವುದಾಗಿ ತಿಳಿಸಿದ್ದಾರೆ.