ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆ ವಹಿಸಿ; ಏಡ್ಸ್ ತಡೆಗಟ್ಟಿ

Last Updated 17 ಡಿಸೆಂಬರ್ 2012, 6:46 IST
ಅಕ್ಷರ ಗಾತ್ರ

ಬಂಗಾರಪೇಟೆ: ಏಡ್ಸ್ ಸ್ವಯಾರ್ಜಿತವಾಗಿ ಪಡೆಯುವ ರೋಗ. ಮುಂಜಾಗ್ರತೆ ವಹಿಸಿ ಹರಡದಂತೆ ತಡೆಯಬೇಕು ಎಂದು ತಹಶೀಲ್ದಾರ್ ಎಸ್.ಎಂ.ಮಂಗಳಾ ಅಭಿಪ್ರಾಯಪಟ್ಟರು.

ಪಟ್ಟಣದ ರಂಗಮಂದಿರದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಆಯೋಜಿಸಿದ್ದ `ವಿಶ್ವ ಏಡ್ಸ್ ದಿನಾಚರಣೆ'ಯಲ್ಲಿ ಮಾತನಾಡಿದ ಅವರು, ಜಾಗೃತಿ ಮೂಡಿಸುತ್ತಿದ್ದರೂ; ಏಡ್ಸ್ ಸೋಂಕಿತರ ಪ್ರಮಾಣ ಏರಿಕೆ ಆಗುತ್ತಿರುವುದು ಆತಂಕಕರ ಎಂದರು.

ಪುರಸಭೆ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿದರು. ಏಡ್ಸ್ ಜಿಲ್ಲಾ ನಿಯಂತ್ರಣ ಅಧಿಕಾರಿ ಡಾ.ಜಗದೀಶ್ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾ ಬಾಲಚಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರಪ್ಪ, ಎಚ್‌ಆರ್‌ಎಫ್‌ಕೆ ಜಿಲ್ಲಾ ಘಟಕ ಸಂಚಾಲಕ ಹೂವರಸನಹಳ್ಳಿ ರಾಜಪ್ಪ, ಲಯನ್ಸ್ ಕ್ಲಬ್ ಸದಸ್ಯ ನಂದಾ, ಸ್ಪ್ಯಾರ್ಡ್ ಸಂಸ್ಥೆ ಕೋಲಾರಪ್ಪ, ಜಿಲ್ಲಾ ಘಟಕ ಸಂಯೋಜಕ ರಾಘವೇಂದ್ರ, ಪೋಕಸ್ ಟ್ರಸ್ಟ್ ಅಧ್ಯಕ್ಷ ಹರೀಶ್, ಚಂದ್ರಮ್ಮ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT