ಮುಂಬೈ (ಪಿಟಿಐ): `ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೆ.... ನಾವು ಅದರಲ್ಲಿ ಮೂತ್ರ ವಿಸರ್ಜನೆ ಮಾಡಬೇಕೆ?'.. ಎಂದು ರೈತರು ಎದುರಿಸುತ್ತಿರುವ ಬರ ಪರಿಸ್ಥಿತಿ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೀಡಿದ ಕೀಳು ಅಭಿರುಚಿಯ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆಗೆ ಅಜಿತ್ ಪವಾರ್ ಕ್ಷಮೆಯಾಚಿಸಿದರು.