ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ ಸೌಕರ್ಯ ವಂಚಿತ ಮಿಟ್ಟೇನಹಳ್ಳಿ

Last Updated 9 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ


ಗೌರಿಬಿದನೂರು: ಇಲ್ಲಿನ ಮಿಟ್ಟೇನಹಳ್ಳಿಯು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಹೆಸರಿಗೆ ಮಾತ್ರ ಪುರಸಭೆ ವ್ಯಾಪ್ತಿಗೆ ಒಳಪಟ್ಟಿದ್ದರೂ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ.ಬೆಂಗಳೂರು ರಸ್ತೆಯ ಎಪಿಎಂಸಿ ಕೃಷಿ ಮಾರುಕಟ್ಟೆಯಿಂದ ಒಂದು ಕಿ.ಮೀ ದೂರದಲ್ಲಿರುವ ಮಿಟ್ಟೇನಹಳ್ಳಿ ವಾರ್ಡ್‌ನಲ್ಲಿ 100 ಕುಟುಂಬಗಳು ವಾಸಿಸುತ್ತಿವೆ.

ಇವರಲ್ಲಿ ಪಟ್ಟಣದಲ್ಲಿ ಕೂಲಿ ಕೆಲಸ ಇಲ್ಲವೇ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರೇ ಹೆಚ್ಚು. ಕೆಲಸ ಮುಗಿಸಿಕೊಂಡು ಮನೆಗೆ ಬರಬೇಕಾದರೆ ಬೆಂಗಳೂರು ರಸ್ತೆಯಿಂದ ಗ್ರಾಮದವರೆಗೂ ವಿದ್ಯುತ್  ದೀಪಗಳಿಲ್ಲದೆ ಕತ್ತಲಿನಲ್ಲೇ ಭಯದಿಂದ ಹೆಜ್ಜೆ ಹಾಕಬೇಕಿದೆ. ಈ ಬಗ್ಗೆ ಪುರಸಭೆಗೆ ಅನೇಕ ಬಾರಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ತಮ್ಮ ಅಸಹಾಯಕತೆಯನ್ನು `ಪ್ರಜಾವಾಣಿ'ಯೊಂದಿಗೆ ಹಂಚಿಕೊಂಡರು.      
              
ಗ್ರಾಮಕ್ಕೆ ಹೋಗಬೇಕಾದರೆ ರಸ್ತೆ ಇಲ್ಲ. ತಾತ್ಕಾಲಿಕವಾಗಿ ಖಾಸಗಿಯವರ ಜಮೀನಿನಲ್ಲಿ  ಜನರು ಓಡಾಡುತ್ತಿದ್ದಾರೆ. ಖಾಸಗಿ ರೂರಲ್ ಡೆವಲಪ್‌ಮೆಂಟ್ ಸಂಸ್ಥೆಯವರು ಚರಂಡಿಗಳನ್ನು ಮಾಡಿಸಿದ್ದಾರೆ. ಬೃಹತ್ ಗಾತ್ರದ ಶೌಚಾಲಯದ ಗುಂಡಿ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಆದರೆ ಚರಂಡಿಗಳ ನೀರು ಗ್ರಾಮದ ಹೊರಗಡೆ ಹರಿಯಲು ಸ್ಥಳಾವಕಾಶವಿಲ್ಲದೆ ತುಂಬಿಕೊಂಡು ಕೆಟ್ಟ ವಾಸನೆ ಬರುತ್ತಿದೆ. ಇಲ್ಲಿನ ನಿವಾಸಿಗಳಿಗೆ ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ.   ಗ್ರಾಮದ ಪ್ರತಿಯೊಂದು ರಸ್ತೆಯಲ್ಲಿ ಖಾಲಿ ನಿವೇಶನಗಳಲ್ಲಿ ಹುಲ್ಲು, ಪಾರ್ಥೇನಿಯಂ ಗಿಡಗಳು ಹೇರಳವಾಗಿ ಬೆಳೆದು ನಿಂತಿವೆ. ಇವುಗಳನ್ನು ಸ್ವಚ್ಛ ಮಾಡಿಲ್ಲ. ಎನ್ನುತ್ತಾರೆ ಇಲ್ಲಿನ ನಿವಾಸಿ ಸರೋಜಮ್ಮ.

ವಾರ್ಡ್‌ಗೆ ಪುರಸಭೆ ವತಿಯಿಂದ ಅನುದಾನ ಬಿಡುಗಡೆಗೊಂಡರೂ ಅಭಿವೃದ್ಧಿ ಮಾತ್ರ ಕಂಡಿಲ್ಲ. ಪುರಸಭೆ ನೌಕರರು ವಾರ್ಡ್‌ಗೆ ಇದುವರೆಗೂ ಸಹ ಭೇಟಿ ನೀಡಿ ಸ್ವಚ್ಛಗೊಳಿಸಿದ್ದಿಲ್ಲ. ಚುನಾವಣೆಯ ಸಂದರ್ಭದಲ್ಲಿ ಆಶ್ವಾಸನೆ ನೀಡಿ ಮತ ಪಡೆದು ಹೋದ ಜನಪ್ರತಿನಿಧಿಗಳು ಇಂದಿಗೂ ನಮ್ಮ ಸಮಸ್ಯೆಗಳನ್ನು ವಿಚಾರಿಸಿಲ್ಲ ಎನ್ನುತ್ತಾರೆ ಇಲ್ಲಿನ ನಿವಾಸಿ ಸರೋಜಮ್ಮ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT