ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯ `ಅಸೋಚಾಂ' ಸಲಹೆ

Last Updated 19 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮೂಲಸೌಕರ್ಯ ಪ್ರಗತಿ ಕಡೆಗಣಿಸಿರುವುದರಿಂದಲೇ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಗಣನೀಯವಾಗಿ ಕುಸಿದಿದೆ. ಮಾಹಿತಿ ತಂತ್ರಜ್ಞಾನ  ಮತ್ತು ಹೊರಗುತ್ತಿಗೆ ಉದ್ಯಮಗಳು ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಗೊಳ್ಳುತ್ತಿವೆ ಎಂದು `ಭಾರತೀಯ ವಾಣಿಜ್ಯೋದ್ಯಮಮಹಾಸಂಘ'ದ(ಅಸೋಚಾಂ) ಪ್ರಧಾನ ಕಾರ್ಯದರ್ಶಿ ಡಿ.ಎಸ್. ರಾವತ್ ಗಮನ ಸೆಳೆದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ  ಅವರು ಮಾತನಾಡಿದರು.`ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್' ಯೋಜನೆಯನ್ನು ಚಿತ್ರದುರ್ಗದವರೆಗೂ ವಿಸ್ತರಿಸಲು ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಈ ಯೋಜನೆಗಳ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ  ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಬೇಕು. ಇದರಿಂದ ಬೆಂಗಳೂರು ಹೊರತುಪಡಿಸಿ ಇತರೆ ಎರಡು ಮತ್ತು ಮೂರನೇ ಹಂತದ ನಗರಗಳಿಗೂ ಬಂಡವಾಳ ಹೂಡಿಕೆ ಆಕರ್ಷಿಸಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT