ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಶಿವಾನಂದ್, ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಮಳಿಗೆಗಳು ಇವೆ. ಇಲ್ಲಿ ಗ್ಯಾರೇಜ್, ವಾಹನಗಳ ಬಿಡಿ ಭಾಗಗಳ ಮಾರಾಟ, ಮರಗೆಲಸ, ಹೋಟೆಲ್ ಇನ್ನಿತರ ಉದ್ಯಮ ನಡೆಯುತ್ತಿದೆ. ಆದರೆ, ಮೂಲಸೌಕರ್ಯಗಳ ಕೊರತೆಯಿಂದ ಉದ್ದಿಮೆದಾರರು ಹಾಗೂ ಕಾರ್ಮಿಕರು ಕೆಲಸ ಮಾಡಲಾಗದ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಿದರು.