ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃದು ಧೋರಣೆ ಇಲ್ಲ: ಎಚ್‌ಡಿಕೆ

Last Updated 20 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಥವಾ ಬಿಜೆಪಿ ಸರ್ಕಾರ ಕುರಿತು ಮೃದು ಧೋರಣೆ ತಳೆದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, `ಯಡಿಯೂರಪ್ಪ ಕಷ್ಟದಲ್ಲಿರುವ ಕಾರಣ ಅವರ ಬಗ್ಗೆ ಅನುಕಂಪ ತೋರಿಸಿದ್ದೇನೆ. ವ್ಯಕ್ತಿಯೊಬ್ಬ ಕಷ್ಟದಲ್ಲಿ ಸಿಲುಕಿರುವಾಗ ಕಾಂಗ್ರೆಸ್ಸಿಗರಂತೆ ಪಟಾಕಿ ಹಚ್ಚಿ ಕುಣಿಯುವುದು ನಮ್ಮಿಂದ ಸಾಧ್ಯವಿಲ್ಲ.
 
ಅದು ಜೆಡಿಎಸ್ ಸಂಸ್ಕೃತಿಯೂ ಅಲ್ಲ~ ಎಂದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಅದರ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡಿದ್ದು ಜೆಡಿಎಸ್; ಕಾಂಗ್ರೆಸ್ ಅಲ್ಲ. ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ತಪ್ಪೆಸಗಿದರೆ ಅವರನ್ನೂ ಟೀಕಿಸಲು ಹಿಂಜರಿಯುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT