ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕತ್ತಲು!

Last Updated 10 ಡಿಸೆಂಬರ್ 2012, 21:01 IST
ಅಕ್ಷರ ಗಾತ್ರ

ಬೃಹತ್ ಬೆಂಗಳೂರು ಮಹಾನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾಕಷ್ಟು ವಿದ್ಯುದ್ದೀಪಗಳು ಇಲ್ಲದೆ, ಕತ್ತಲಲ್ಲಿ ಪ್ರಯಾಣಿಕರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ತಡಕಾಡ ಬೇಕಾಗುತ್ತದೆ. ಸದಾ ಪ್ರಯಾಣಿಕರಿಂದ ತುಂಬಿ ತುಳುಕುವ ಬಸ್ ನಿಲ್ದಾಣದಲ್ಲಿ ರಾತ್ರಿಯ ವೇಳೆಯಲ್ಲಿ ಅತಿ ಪ್ರಕಾಶಮಾನವಾದ ವಿದ್ಯುತ್ ದೀಪಗಳನ್ನು ಅಳವಡಿಸಬೇಕು.

ರೈಲು ನಿಲ್ದಾಣದಲ್ಲೂ ಸಮಸ್ಯೆ: ಬೆಂಗಳೂರು ಸಿಟಿ ರೈಲು ನಿಲ್ದಾಣದಲ್ಲಿ ಕಾಲಕಾಲಕ್ಕೆ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ರೈಲುಗಳ ಸಂಚಾರದ ಬಗ್ಗೆ ತಿಳಿಸುವ ಮಾಹಿತಿ ಸರಿಯಾಗಿ ಸ್ಪಷ್ಟವಾಗಿ ಉದ್ಘೋಷಿಸುವಂತೆ ಸಂಬಂಧಿಸಿದವರಿಗೆ ತಿಳಿಸಬೇಕಾಗಿದೆ. ಈಗ ನೀಡುವ ಮಾಹಿತಿ ಸರಿಯಾಗಿ ಅರ್ಥವಾಗುವಂತೆ ಬರುತ್ತಿಲ್ಲ. ಈ ಅವ್ಯವಸ್ಥೆಗಳನ್ನು ಸರಿಪಡಿಸಲಿ ಎಂದು ಈ ಮೂಲಕ ವಿನಂತಿಸುತ್ತೇನೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT