ಆದುದರಿಂದ ಜೆ.ಪಿ.ನಗರ ತಿರುವಿನಿಂದ ಹಿಡಿದು ಬನ್ನೇರುಘಟ್ಟದ ಮುಖ್ಯ ರಸ್ತೆಯ ತುದಿಯ ತನಕ ಮೇಲ್ಸೇತುವೆಯನ್ನು ನಿರ್ಮಾಣ ಮಾಡಿದರೆ ವಾಹನ ಸವಾರರಿಗೆ ಮತ್ತು ನಾಗರಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೆ ಈ ರಸ್ತೆಯಲ್ಲಿ ಹಲವಾರು ಪ್ರಮುಖ ಆಸ್ಪತ್ರೆಗಳಿದ್ದು, ರೋಗಿಗಳನ್ನು ಆಂಬುಲೆನ್ಸ್ನಲ್ಲಿ ಸಕಾಲಕ್ಕೆ ಸಾಗಿಸಲು ಕೂಡ ಇದರಿಂದ ಸಹಾಯವಾಗುತ್ತದೆ.