ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಸೇತುವೆ ಬೇಕು

Last Updated 6 ಜೂನ್ 2011, 12:45 IST
ಅಕ್ಷರ ಗಾತ್ರ

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಾನಿಕ್ ಸಿಟಿ ಮತ್ತು ಇತರೆ ಪ್ರದೇಶಗಳಲ್ಲಿ ಮೇಲ್ಸೇತುವೆಗಳು ಬಂದಿರುವುದರಿಂದ ವಾಹನದ ದಟ್ಟಣೆ ನಿಯಂತ್ರಣಕ್ಕೆ ಬಂದಿರುತ್ತದೆ.

ಆದರೆ ಜೆ.ಪಿ.ನಗರದ ತಿರುವಿನಿಂದ ಹಿಡಿದು ಬನ್ನೇರುಘಟ್ಟದ ಮುಖ್ಯ ರಸ್ತೆ ತುದಿಯ ತನಕ ಬೆಳಿಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ವಾಹನಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಸಂಚರಿಸುವುದರಿಂದ ಟ್ರಾಫಿಕ್ ಜಾಮ್ ಸಾಮಾನ್ಯ ಎನ್ನುವಂತಾಗಿದೆ. ವಿಶೇಷವಾಗಿ, ಮಳೆ ಬಂದಂತಹ ಸಂದರ್ಭದಲ್ಲಿ ಇಲ್ಲಿ ಸಂಚಾರ ವ್ಯವಸ್ಥೆಯಂತೂ ಸಂಪೂರ್ಣವಾಗಿ ಅಸ್ತವ್ಯಸ್ತಗೊಳ್ಳುತ್ತದೆ.

ಆದುದರಿಂದ ಜೆ.ಪಿ.ನಗರ ತಿರುವಿನಿಂದ ಹಿಡಿದು ಬನ್ನೇರುಘಟ್ಟದ ಮುಖ್ಯ ರಸ್ತೆಯ ತುದಿಯ ತನಕ ಮೇಲ್ಸೇತುವೆಯನ್ನು ನಿರ್ಮಾಣ ಮಾಡಿದರೆ ವಾಹನ ಸವಾರರಿಗೆ ಮತ್ತು ನಾಗರಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೆ ಈ ರಸ್ತೆಯಲ್ಲಿ ಹಲವಾರು ಪ್ರಮುಖ ಆಸ್ಪತ್ರೆಗಳಿದ್ದು, ರೋಗಿಗಳನ್ನು ಆಂಬುಲೆನ್ಸ್‌ನಲ್ಲಿ ಸಕಾಲಕ್ಕೆ ಸಾಗಿಸಲು ಕೂಡ ಇದರಿಂದ ಸಹಾಯವಾಗುತ್ತದೆ.

ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟವರು ಇತ್ತ ಕಡೆ ಗಮನ ಹರಿಸುವರೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT