ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಒತ್ತಡದ ಬಜೆಟ್

Last Updated 25 ಫೆಬ್ರುವರಿ 2011, 17:25 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಸಚಿವೆ ಮಮತಾ ಬ್ಯಾನರ್ಜಿ ಅವರು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿರುವ ಬಜೆಟ್ ತಂತ್ರಗಾರಿಕೆಯಿಂದ ಕೂಡಿದ್ದು, ಮೈತ್ರಿ ಒತ್ತಡಕ್ಕೆ ಮಣಿದು ಸಿದ್ಧಪಡಿಸಿದಂತಿದೆ ಎಂದು ಸಿಪಿಎಂ ದೂರಿದೆ.

ಈ ಬಜೆಟ್ ಉದ್ದೇಶಹೀನವಾಗಿದ್ದು, ಇಂತಹದ್ದೊಂದು ಬಜೆಟ್ ಮಂಡಿಸಲು ಪ್ರಧಾನಿ ಅವಕಾಶ ನೀಡಿರುವುದಾದರೂ ಹೇಗೆ ಎಂದು ಸಿಪಿಎಂ ರಾಜ್ಯಸಭಾ ಸದಸ್ಯ ಸೀತಾರಾಮ್ ಯೆಚೂರಿ ಪ್ರಶ್ನಿಸಿದ್ದಾರೆ.

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ತಯಾರಿಸಲಾಗಿದೆ. ಬಜೆಟ್‌ನಲ್ಲಿ ಮತ್ತೇನೂ ಇಲ್ಲ ಎಂದು ಹೇಳಿದರು.

‘ಪಶ್ಚಿಮ ಬಂಗಾಳ ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಪ್ರಕಟಿಸಿರುವ ಮಮತಾ ದೀದಿ, ಇವನ್ನು ಬಹಳ ಚಾಣಾಕ್ಷತನದಿಂದ 12ನೇ ಪಂಚವಾರ್ಷಿಕ ಯೋಜನೆಯಡಿ ಬರುವ ಪ್ರಧಾನ ಮಂತ್ರಿಗಳ ರೈಲ್ವೆ ವಿಕಾಸ ಯೋಜನೆಯಲ್ಲಿ ಸೇರಿಸಿದ್ದಾರೆ. ಕಳೆದ ಬಾರಿ ಘೋಷಿಸಿದ್ದ ಅನೇಕ ಯೋಜನೆಗಳೇ ಇನ್ನೂ ಜಾರಿಗೆ ಬಂದಿಲ್ಲ. ಹೀಗಾಗಿ ಹೊಸ ಯೋಜನೆಗಳಿಗೆ ಅರ್ಥವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT