ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ರಂಗಾಯಣ ನಿರ್ದೇಶಕರಾಗಿ ಜನ್ನಿ

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕರಾಗಿ ಖ್ಯಾತ ರಂಗಕರ್ಮಿ ಜನಾರ್ದನ್ (ಜನ್ನಿ) ನೇಮಕ­­ಗೊಂಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ರಾಷ್ಟ್ರೀಯ ನಾಟಕ ಶಾಲೆ (ಎನ್‌ಎಸ್‌ಡಿ)ಯ ಪದವೀಧರರಾದ ಅವರು, ಮೈಸೂರಿನಲ್ಲಿ ನೆಲೆ ನಿಂತು ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಮೈಸೂರು ವರದಿ: ‘ರಂಗಾಯಣದ ಒಟ್ಟು ಒಳಿತಿನ, ಆರೋಗ್ಯಪೂರ್ಣ ಬೆಳವಣಿಗೆಗೆ ಶ್ರಮಿಸುವೆ’ ಎಂದು ಜನ್ನಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.

‘ನಾಡಿನ ಎಲ್ಲ ರಂಗಕರ್ಮಿಗಳ ಸಹಕಾರದಲ್ಲಿ ಹೊಸ ರೀತಿಯ, ಹೊಸ ಆಲೋಚನೆಯ ರಂಗಾಯಣವನ್ನು ಕಟ್ಟಲು, ಈ ಮೂಲಕ ರಂಗ ಚಳವಳಿ ರೂಪಿಸಲು ಅವಕಾಶ ಸಿಕ್ಕಿದೆ’ ಎಂದು ಖುಷಿಯಾಗಿ ಹೇಳಿದರು.

ಜನ್ನಿ ಅವರು ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ರಂಗ ಶಿಕ್ಷಕರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT