ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್ ಬಳಕೆ ಕಡಿಮೆ ಮಾಡಿ

Last Updated 22 ಜನವರಿ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: `ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಓದಿನ ತಯಾರಿ ನಡೆಸುವಾಗ ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಆಗ ಏಕಾಗ್ರತೆಯಿಂದ ಓದಬಹುದು~ ಎಂದು ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಹೇಳಿದರು.

ನಗರದ ಮಾರತ್‌ಹಳ್ಳಿಯ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ `ಪರೀಕ್ಷೆ ಎದುರಿಸುವುದು ಹೇಗೆ~ ಎಂಬ ಶಿಬಿರದಲ್ಲಿ ಅವರು ಮಾತನಾಡಿದರು.

`ಟಿವಿಯನ್ನು  ವಾರಾಂತ್ಯದಲ್ಲಿ ಕೆಲವು ಗಂಟೆಗಳು ಮಾತ್ರ ನೋಡಿ, ವಾರದ ದಿನಗಳನ್ನು ವ್ಯವಸ್ಥಿತವಾಗಿ ಬಳಸಿಕೊಂಡರೆ, ನಂತರ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ  ಪರೀಕ್ಷೆ ಎದುರಿಸಲು ಸಿದ್ಧರಾಗಬಹುದು~ ಎಂದು  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. `ಪರೀಕ್ಷೆ ಸಮಯ ಬಂದಾಗ ಮಾತ್ರ ಓದುವುದನ್ನು ಆರಂಭಿಸುವ ಬದಲು, ಆಯಾ ದಿನದ ಓದನ್ನು ಅದೇ ದಿನ ಮುಗಿಸಬೇಕು. ಇದರಿಂದ ಹೊರೆ ಕಡಿಮೆಯಾಗುತ್ತದೆ. ಯಾವಾಗಲೂ ಸಂತಸದಿಂದ ಪ್ರತಿಕ್ಷಣವನ್ನು ಕಳೆಯಬೇಕು~ ಎಂದು ಸಲಹೆ ನೀಡಿದರು.

`ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಉತ್ತಮ ಆರೋಗ್ಯ, ಕೌಟುಂಬಿಕ ಪ್ರೀತಿ ಮತ್ತು ಸಂತೋಷಗಳು ಇದ್ದಾಗ ವಿದ್ಯಾರ್ಥಿಗಳು ಯಾವುದೇ ಸವಾಲನ್ನು ಎದುರಿಸುತ್ತಾರೆ. ಇದರ ಮೂಲಕ ವಿದ್ಯಾರ್ಥಿಗಳು ಓದುವ ಕೌಶಲ್ಯ ಬೆಳಸಿಕೊಳ್ಳಬೇಕು. ಪರೀಕ್ಷೆಯನ್ನು ಯಾವುದೇ ಭಯವಿಲ್ಲದೆ ಬರೆಯಬೇಕು~ ಎಂದರು.

`ಪರೀಕ್ಷಾ ಸಂದರ್ಭದಲ್ಲಿ ಶಿಕ್ಷಕರು ಮತ್ತು ಪೋಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿಗಳಿಗೆ ಸಕಾರಾತ್ಮಕವಾದ ವಿಚಾರಗಳನ್ನು ಹೇಳುವ ಮೂಲಕ ಅವರ ಭಯವನ್ನು ಹೋಗಲಾಡಿಸಬೇಕು. ವಿದ್ಯಾರ್ಥಿಗಳೂ ಸಹ ಬರವಣಿಗೆಯ ಶುದ್ಧತೆ, ವೇಗವಾಗಿ ಬರೆಯುವ ತಂತ್ರಗಾರಿಕೆ ಮತ್ತು ಶ್ರದ್ಧೆಯನ್ನು ಬೆಳಸಿಕೊಳ್ಳುವುದು ಮುಖ್ಯವಾಗುತ್ತದೆ~ ಎಂದರು.
ವಾಗ್ದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT