ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಲ ಬೇಟೆಗೆ ಯತ್ನ: ಮೂವರ ಬಂಧನ

Last Updated 4 ಡಿಸೆಂಬರ್ 2012, 8:29 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥ ಸ್ವಾಮಿ ಹುಲಿ ರಕ್ಷಿತಾರಣ್ಯದ(ಬಿಆರ್‌ಟಿ) ಕೆ. ಗುಡಿ ವಲಯದಲ್ಲಿ ಉರುಳು ಹಾಕಿ ಮೊಲದ ಬೇಟೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜೋಯಿಸ್‌ಕೊಪ್ಪಲು ಗ್ರಾಮದ ಸುರೇಶ್, ಬೀರಲಿಂಗ ಹಾಗೂ ಪಾತಯ್ಯ ಬಂಧಿತರು. ಆರೋಪಿಗಳಿಂದ ಉರುಳು ವಶಪಡಿಸಿ ಕೊಳ್ಳಲಾಗಿದೆ. ಬಂಧಿತರು ಶುಂಠಿ ಜಮೀನಿನಲ್ಲಿ ಕೆಲಸ ಮಾಡಲು ಕೂಲಿ ಅರಸಿಕೊಂಡು ಯಳಂದೂರಿಗೆ ಬಂದಿದ್ದಾರೆ. ಯಜಮಾನ ಕಟ್ಟೆಯ ಐಯ್ಯನಪುರ ಬೀಟ್ ಬಳಿ ಉರುಳು ಅಳವಡಿಸಿ ಮೊಲ ಹಿಡಿಯಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳನ್ನು ಡಿ. 17ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೆ. ಗುಡಿಯ ವಲಯ ಅರಣ್ಯಾಧಿಕಾರಿ ಎ.ಎ. ಖಾನ್ ನೇತೃತ್ವದಲ್ಲಿ ಸಿಬ್ಬಂದಿಯಾದ ಎಂ. ರವಿ, ರವಿಕುಮಾರ್, ರಮೇಶ್, ಮಹದೇವ್, ಮಹದೇವಸ್ವಾಮಿ ಹಾಗೂ ರಂಗಸ್ವಾಮಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT