ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪರ ಮಾತಿಗೆ ಶಿಸ್ತುಕ್ರಮ: ಮಲೈಚಾಮಿ ಉಚ್ಚಾಟಿಸಿದ ಜಯಾ

Last Updated 15 ಮೇ 2014, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ‘ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಜಯಲಲಿತಾ ಅವರ ಉತ್ತಮ ಸ್ನೇಹಿತ’ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಮಾಜಿ ರಾಜ್ಯಸಭಾ ಸದಸ್ಯ ಕೆ. ಮಲೈಚಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ.ಜಯ­ಲಲಿತಾ ಅವರು ಪಕ್ಷದಿಂದ ಗುರುವಾರ ಉಚ್ಚಾಟನೆ ಮಾಡಿದ್ದಾರೆ.

ಪಕ್ಷದ ಶಿಸ್ತನ್ನು ಉಲ್ಲಂಘಿಸುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದ್ದರಿಂದ ಮಲೈಚಾಮಿ ಅವರ  ಎಐಎಡಿಎಂಕೆಯ ಪ್ರಾಥಮಿಕ ಸದಸ್ಯತ್ವ­ ವನ್ನು ರದ್ದು ಮಾಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

‘ಲೋಕಸಭೆ ಚುನಾ­ವಣೆ ಫಲಿತಾಂಶ ಪ್ರಕಟವಾದ ನಂತರ ಮೋದಿ ಸರ್ಕಾರದಲ್ಲಿ ಎಐಎಡಿಎಂಕೆ  ಪ್ರಮುಖ ಪಾತ್ರ ವಹಿಸಲಿದೆ’
ಎಂದು ಮಲೈಚಾಮಿ ಇತ್ತೀಚೆಗೆ ಹೇಳಿದ್ದರು.

ಇನ್ನೊಂದೆಡೆ, ಜಯಲಲಿತಾ ತಮ್ಮ ರಾಜಕೀಯ ನಿಲುವಿನ ಬಗ್ಗೆ ಮೌನ ವಹಿ­ಸಿದ್ದು, ಫಲಿತಾಂಶ ಹೊರ­ಬೀಳು­ವವ­ರೆಗೆ ಕಾದು ನೋಡುತ್ತೇವೆ ಎಂದು ತಿಳಿಸಿ­ದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT