ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪರ ಸಾಮಾಜಿಕ ಜಾಲತಾಣ ಬಳಕೆ

ಬಿಜೆಪಿ ಅಧ್ಯಕ್ಷ ರಾಜನಾಥ್‌ಸಿಂಗ್
Last Updated 6 ಸೆಪ್ಟೆಂಬರ್ 2013, 20:07 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  `ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ ದಿನದಿಂದಲೇ ಅವರ ವಿರುದ್ಧ ಟೀಕೆಗಳು ಆರಂಭವಾಗಿದ್ದು , ಭವಿಷ್ಯತ್ತಿನಲ್ಲಿ ಇಂತಹ ಟೀಕೆಗಳು ಮತ್ತಷ್ಟು ಹೆಚ್ಚಬಹುದು' ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬಿಜೆಪಿಯ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಜನಾಥ್, `ನಮ್ಮ ಜನಪ್ರಿಯ ಮುಖ್ಯಮಂತ್ರಿ ನರೇಂದ್ರ ಭಾಯಿ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ನಾವು ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಸತ್ಯ ಯಾವತ್ತೂ ಸತ್ಯವೇ. ನಾವು ಇದನ್ನೆಲ್ಲ ಒಗ್ಗಟ್ಟಾಗಿ ಎದುರಿಸುತ್ತೇವೆ. ಈ ಉದ್ದೇಶಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮೋದಿ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿರುವುದನ್ನು ಜನಕ್ಕೆ ತಿಳಿಸುತ್ತೇವೆ' ಎಂದರು.

ಮೋದಿ ಕುರಿತು ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಪಕ್ಷದ `ಇ-ಕಾರ್ಯಕರ್ತ'ರು  ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ತನ್ನ ಸಾಧನೆಗಳನ್ನು ಮುಂದಿಟ್ಟುಕೊಂಡು ಮುಂಬರುವ ಲೋಕಸಭಾ ಚುನಾವಣೆಯನ್ನು ಗೆಲ್ಲಲು ಸಾಧ್ಯವಾಗದು ಎಂಬ ಅರಿವು ಯುಪಿಎ ಸರ್ಕಾರಕ್ಕೆ ಆಗಿದೆ, ಈ ವೈಫಲ್ಯಗಳನ್ನು ಜನರಿಂದ ಮರೆಮಾಚಲು ಸರ್ಕಾರ ಕೋಮುವಾದ ವಿರುದ್ಧ ಜಾತ್ಯಾತೀತತೆ ವಿಷಯವನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಸಿಂಗ್ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT