ಹಾಸನ: ‘ಜಾತಿ ಮತ್ತು ಧರ್ಮದ ಹೆಸರಿನಲ್ಲಿ ರಾಜಕೀಯ ಧ್ರುವೀಕರಣ ಸಾಧ್ಯವಿಲ್ಲ ಎಂಬುದು ನರೇಂದ್ರ ಮೋದಿ ಅವರಿಗೆ ಅರ್ಥವಾಗಿದ್ದರೆ, ಅವರ ಪಕ್ಷ ಇಷ್ಟು ವರ್ಷ ಜಾತಿ, ಧರ್ಮದ ಆಧಾರದಲ್ಲೇ ಯಾಕೆ ರಾಜಕೀಯ ಮಾಡುತ್ತ ಬಂದಿದೆ ಎಂಬುದನ್ನು ಜನತೆಗೆ ತಿಳಿಸಬೇಕು’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.