ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌಲ್ಯದ ಬಗ್ಗೆ ಅರಿವು ಮೂಡಿಸಿ

Last Updated 9 ಜುಲೈ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು:`ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಕ್ರಾಂತಿ ಮಾಡಬೇಕಿಲ್ಲ, ಬದಲಿಗೆ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು~ ಎಂದು ರಾಷ್ಟ್ರೀಯ ಪಠ್ಯಕ್ರಮ ಪರಿಷ್ಕರಣೆ ಹಾಗೂ ಪಠ್ಯಪುಸ್ತಕ ರಚನಾ ಸಂಯೋಜಕ ಜೆ.ಎಸ್.ಮೂಡಂಬಡಿತ್ತಾಯ ಹೇಳಿದರು.

ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘವು ನಗರದ ಕನ್ನಡ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಾಗಾರ- ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
`ಶಿಕ್ಷಣವೆಂಬುದು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ಮಕ್ಕಳಲ್ಲಿರುವ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಪಠ್ಯೇತರ ವಿಚಾರಗಳಿಗೆ ಒತ್ತು ನೀಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕಲೆಯು ವ್ಯಾಪಾರದ ವಸ್ತುವಾಗದೇ ವ್ಯಕ್ತಿತ್ವ ವಿಕಸನದ ಮಾರ್ಗವಾಗಿ ರೂಪಗೊಳ್ಳಬೇಕು~ ಎಂದು ಸಲಹೆ ನೀಡಿದರು.

ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಎನ್.ಬಿ.ಪಾಟೀಲ, `ಚಿತ್ರಕಲಾ ವಿಷಯ ಕೇವಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾಗದೇ, ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಚಿತ್ರಕಲಾ ವಿಷಯವನ್ನು ಅಳವಡಿಸಬೇಕು. ಆಗ ಮಾತ್ರ ಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ~ ಎಂದು ತಿಳಿಸಿದರು.

`ಪಠ್ಯಪುಸ್ತಕದಷ್ಟೆ ದೈಹಿಕ ಮತ್ತು ಕಲಾ ಶಿಕ್ಷಣ ಪ್ರಮುಖವಾಗಿದ್ದು, ಬಹುತೇಕ ಶಾಲೆಗಳಲ್ಲಿ ಅರೆಕಾಲಿಕರಾಗಿ ಸೇವೆ ಸಲ್ಲಿಸುತ್ತಿರುವ ಚಿತ್ರಕಲಾ ಶಿಕ್ಷಕರನ್ನು ದೀರ್ಘಾವಧಿಗೆ ನೇಮಿಸಿಕೊಳ್ಳಬೇಕು~ ಎಂದು ಒತ್ತಾಯಿಸಿದರು.
ಚಿತ್ರಕಲಾ ಶಿಕ್ಷಕರಿಗೆ `ಶ್ರಮ ಜೀವಿ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಿತ್ರಕಲಾ ಶಿಕ್ಷಣ ಪಠ್ಯವಸ್ತು ರಚನಾ ಸಮಿತಿಯ ಅಧ್ಯಕ್ಷ ಐ.ಎನ್.ಜೋಶಿ, ಲಲಿತಕಲಾ ಅಕಾಡೆಮಿ ಅಧ್ಯಕ್ಷ ಚಿ.ಸು.ಕೃಷ್ಣಶೆಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT