ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಅವರ ಕ್ಷಮೆಯಾಚಿಸಿದ ನಿರಾಣಿ

Last Updated 5 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬಾಗಲಕೋಟೆ: `ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿಯಾಗಿ ಬೀಳಗಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ, ನನ್ನ ಈ ನಿರ್ಧಾರದಿಂದ ರಾಜಕೀಯ ಗುರುಗಳಾದ ಯಡಿಯೂರಪ್ಪನವರ ಮನಸ್ಸಿಗೆ ನೋವಾಗಿದ್ದರೇ ದಯವಿಟ್ಟು ಕ್ಷಮಿಸಬೇಕು' ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮನವಿ ಮಾಡಿಕೊಂಡರು.

`ನನ್ನ ರಾಜಕೀಯ ಜೀವನದಲ್ಲಿ ಬಿ.ಎಸ್.ಯಡಿಯೂರಪ್ಪನವರ ಆಶೀರ್ವಾದ, ಬೆಂಬಲ ಪ್ರಮುಖವಾಗಿದೆ. ತಂದೆ ಸ್ಥಾನದಲ್ಲಿರುವ ಅವರ ಅಪೇಕ್ಷೆಗೆ ವಿರುದ್ಧವಾಗಿ ನಿರ್ಧಾರವನ್ನು ಅನಿವಾರ್ಯವಾಗಿ ಕೈಗೊಂಡಿದ್ದೇನೆ. ಯಾವುದೇ ಒತ್ತಡ, ಲಾಬಿಗೆ ಮಣಿದಿಲ್ಲ' ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

`ರಾಜಕೀಯ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬ ಆಗಿರುವುದರಿಂದ ಉಂಟಾದ ಗೊಂದಲದಿಂದ ನನಗೂ ಬೇಸರ ತರಿಸಿದೆ. ಆದ್ದರಿಂದ ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ನಿರ್ಧರಿಸಿದ್ದೇನೆ' ಎಂದು ಹೇಳಿದರು.

`ನನ್ನ ನಿರ್ಧಾರದಲ್ಲಿನ ವಿಳಂಬ ಕುರಿತು ಕೆಲವರಲ್ಲಿ ಅಸಮಾಧಾನವಿದ್ದರೂ ಬೀಳಗಿ ಕ್ಷೇತ್ರದ ಜನತೆ ನನ್ನನ್ನು ಕೈಬಿಡುವುದಿಲ್ಲ,  ನನ್ನ ಎರಡು ಅವಧಿಯಲ್ಲಿ ಆಗಿರುವ ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೆ' ಎಂದು ಮುರುಗೇಶ್ ನಿರಾಣಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT