ನ್ಯಾಯಾಲಯದ ಆದೇಶದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರನ್ನು ತಕ್ಷಣ ಬಂಧಿಸಲಾಯಿತು. ಅನಾರೋಗ್ಯದ ಕಾರಣದಿಂದ ನ್ಯಾಯಾಲಯಕ್ಕೆ ಬಾರದೇ ಮನೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಬಂಧನದ ವಾರೆಂಟ್ ಹೊರಡಿಸಿದೆ.
ಈ ಹಗರಣದಲ್ಲಿ ಆರೋಪಿಗಳಾಗಿರುವ ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಸೋಹನಕುಮಾರ್, ಶಾಸಕರಾದ ಹೇಮಚಂದ್ರ ಸಾಗರ್ ಹಾಗೂ ಉದ್ಯಮಿ ಪ್ರವೀಣ್ ಚಂದ್ರ ಸೇರಿದಂತೆ 14 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.