ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಬಣದಿಂದ ಜುಲೈ 5 ರ ಗಡುವು

Last Updated 1 ಜುಲೈ 2012, 9:35 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಣವು ಜಗದೀಶ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡುವುದಕ್ಕೆ ಜುಲೈ 5  ರ ಗಡುವು ನೀಡಿದೆ.

ಭಾನುವಾರ ಬೆಳಿಗ್ಗೆ ಶೆಟ್ಟರ್ ಅವರ ನಿವಾಸದಲ್ಲಿ ಸಭೆ ಸೇರಿದ ಯಡಿಯೂರಪ್ಪ ಬಣದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸರ್ವಾನುಮತದಿಂದ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಲು ಜುಲೈ 5 ರ ಗಡುವನ್ನು ವಿಧಿಸಿದರು.

ಈ ವಿಷಯನ್ನು ಖಚಿತಪಡಿಸಿದ ರಾಜೂಗೌಡ ಅವರು ತಾವೆಲ್ಲರೂ ಒಕ್ಕೊರಲಿನಿಂದ ಜುಲೈ 5 ರ ಒಳಗಾಗಿ ಜಗದೀಶ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕೆಂದು ಮನವಿ ಮಾಡಿದ್ದಾಗಿ ತಿಳಿಸಿದರು.

ಒಂದು ವೇಳೆ  ತಮ್ಮ ಬೇಡಿಕೆ ಈಡೇರದೆ ಹೋದರೆ ಜುಲೈ 5 ರಂದು ತಾವು ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ 55 ಶಾಸಕರು, 15 ವಿಧಾನಪರಿಷತ್ ಸದಸ್ಯರು ಹಾಗೂ 8 ಮಂದಿ ಸಂಸದರೂ ಭಾಗವಹಿಸಿದ್ದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT