ಡಿಸೆಂಬರ್ 10ರಂದು ನ್ಯಾಯಾಲಯದ ಎದುರು ಹಾಜರಾಗುವಂತೆ ನವೆಂಬರ್ 9ರಂದು ಸಿಬಿಐ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೂ ಸಮನ್ಸ್ ನೀಡಿತ್ತು. ಈ ಆದೇಶದಂತೆ ಯಡಿಯೂರಪ್ಪ, ಅವರ ಪುತ್ರರಾದ ರಾಘವೇಂದ್ರ ಮತ್ತು ವಿಜಯೇಂದ್ರ, ಅಳಿಯ ಸೋಹನ್ ಕುಮಾರ್ ಹಾಗೂ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೋಮವಾರ ಕೋರ್ಟ್ ಎದುರು ಹಾಜರಾದರು.
ಈ ವೇಳೆ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಎಂ. ಸಿ. ಬಿರಾದಾರ್ ಅವರು, ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಅಥವಾ ತಲೆಮರೆಸಿಕೊಳ್ಳುವ ಸಾಧ್ಯತೆ ಇಲ್ಲ ಎಂಬುದನ್ನು ಪರಿಗಣಿಸಿ ಜಾಮೀನು ನೀಡಲು ನಿರ್ಧರಿಸಿದರು. ಮುಂದಿನ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಲಾಯಿತು.