ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕದಲ್ಲಿ ಕನ್ನಡ ರಾಜ್ಯೋತ್ಸವ

Last Updated 11 ಡಿಸೆಂಬರ್ 2013, 19:49 IST
ಅಕ್ಷರ ಗಾತ್ರ

ಯಲಹಂಕ: ಅಂತರರಾಷ್ಟ್ರೀಯ ವಿಮಾನ­ನಿಲ್ದಾಣ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡುವುದರ ಜತೆಗೆ  ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರಾಧಿಕಾರದ ಹುದ್ದೆಗಳಲ್ಲಿ ಶೇ.90­ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.­ನಾರಾಯಣಗೌಡ ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಬ್ಯಾಟರಾಯನಪುರ ಕ್ಷೇತ್ರಘಟಕದ ವತಿ­ಯಿಂದ ಅಂತರರಾಷ್ಟ್ರೀಯ ವಿಮಾನ­ನಿಲ್ದಾಣ ರಸ್ತೆಯ ವಿದ್ಯಾನಗರ ಕ್ರಾಸ್‌ ಬಳಿ ಆಯೋಜಿಸಿದ್ದ ಕನ್ನಡ ರಾಜ್ಯೋ­ತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡುವುದರ ಜೊತೆಗೆ ಹೊರರಾಜ್ಯ ಹಾಗೂ ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಆಗಮಿಸುವ ಜನರಿಗೆ ಕೆಂಪೇ­ಗೌಡರ ಬಗ್ಗೆ ತಿಳಿಸಲು, ನಿಲ್ದಾಣ­ದೊಳಗೆ ಅವರ ಇತಿಹಾಸ ಸಾರುವ ನಾಮಫಲಕಗಳನ್ನು ಹಾಕಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT