ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯು.ಆರ್. ಅನಂತಮೂರ್ತಿ ಆಶಯ ರೆಡ್ಡಿ ಹೆಚ್ಚು ಕಾಲ ಜೈಲಿನಲ್ಲಿರಲಿ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರಿಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ. ಏಕೆಂದರೆ ಉತ್ತಮ ಆರೋಗ್ಯವಿದ್ದರೆ ಅವರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಬಹುದಾಗಿದೆ~ ಎಂದು ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಲೇವಡಿ ಮಾಡಿದರು.

`ರಾಜ್ಯದಲ್ಲಿ ಅರಣ್ಯ ಸಂಪತ್ತು ನಾಶವಾಗಿದೆ. ಪರಿಣಾಮವಾಗಿ ರಾಜ್ಯ ಹೀನಾಯ ಸ್ಥಿತಿ ತಲುಪಿದೆ. ಇದರಿಂದ ನೋವಾಗುವ ಜತೆಗೆ ಆಕ್ರೋಶವೂ ಉಂಟಾಗುತ್ತದೆ. ಹಾಗಾಗಿ ಸಂಪತ್ತು ಲೂಟಿ ಮಾಡಿದ ರೆಡ್ಡಿ ಸಹೋದರು ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸುವಂತಾಗಲಿ~ ಎಂದರು.

ಪ್ರೊ. ಹಂಪ ನಾಗರಾಜಯ್ಯ ಅವರ 100ನೇ ಕೃತಿ `ಕುವೆಂಪು ವಿಗ್ನೆಟ್ಸ್ ಆಫ್ ಮ್ಯಾನ್ ಅಂಡ್ ಮಿಷನ್~ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.ಜರ್ಮನಿಯ ವುರ್ಲ್ಸ್‌ಬರ್ಗ್ ವಿಶ್ವವಿದ್ಯಾಲಯದ ಇಂಡಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎ. ವಿವೇಕ ರೈ, `ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಬಂದಿದ್ದರೂ ಕನ್ನಡದ ಲೇಖಕರ ಬಗ್ಗೆ ಮಾಹಿತಿ ನೀಡುವ ವೆಬ್‌ಸೈಟ್‌ಗಳು ಇಲ್ಲದಿರುವುದು ದುರದೃಷ್ಟಕರ.
 
ಹಾಗಾಗಿ ಕನ್ನಡದ ಶ್ರೇಷ್ಠ ಸಾಹಿತಿಗಳ ವಿವರಗಳನ್ನೊಳಗೊಂಡ ವೆಬ್‌ಸೈಟ್ ಆರಂಭಿಸಬೇಕು~ ಎಂದರು.ಅಕ್ಷರ ಪ್ರಿಂಟರ್ಸ್‌ ಪಬ್ಲಿಷರ್ಸ್‌ ಮಾಲೀಕ ಆರ್. ನಾಗರಾಜ್ ಉಪಸ್ಥಿತರಿದ್ದರು. ಕೃತಿಯ ಬೆಲೆ ರೂ 250.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT